1:09 PM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಮುಂಗಾರು ಮುಗಿಯುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ!: ಬರದ ಕರಿಛಾಯೆಯಲ್ಲಿ ಜನರ ಬದುಕು!!

04/09/2023, 10:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪ್ರಸಕ್ತ ಸಾಲಿನ ಮುಂಗಾರು ಮುಗಿಯುವ ಮುನ್ನವೇ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ. ರಾಜ್ಯಾದ್ಯಂತ ಈ ಬಾರಿ ಮಳೆ ಪ್ರಮಾಣ ತೀರಾ ಇಳಿಮುಖವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಹೇಳಿ ತೀರದು.


ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರದ ಪರಿಸ್ಥಿತಿ ಏರ್ಪಟ್ಟಿದ್ದು ಸಕಾಲಕ್ಕೆ ಮಳೆಯಾಗದ ಕಾರಣ ಬರದ ಛಾಯೆ ಆವರಿಸಿದೆ. ತಾಲೂಕಿನ ಅಡಹಳ್ಳಿ,ಕೋಹಳ್ಳಿ,ಕಕಮರಿ,ಐಗಳಿ ಸೇರಿದಂತೆ ಕೊಟ್ಟಲಗಿ ಭಾಗದಲ್ಲಿ ಕುಡಿಯುವ ನೀರಿಗೆ ಜನರು ಪರದಾಡುವ ಪರಿಸ್ಥಿತಿ ಎದುರಾಗಿದ್ದು ಕಿಲೋ ಮೀಟರಗಟ್ಟಲೆ ಸಂಚರಿಸಿ ಕುಡಿಯುವ ನೀರು ತರಬೇಕಾಗಿದ್ದು ಮಹಿಳೆಯರು,ಪುರುಷರು ನಿತ್ಯದ ದುಡಿಮೆ ನಿಲ್ಲಿಸಿ ನೀರಿಗಾಗಿ ಅಲೆಯುವಂತಾಗಿದೆ.
ರಾಜ್ಯದ ಜನರಿಗೆ ವಿವಿಧ ಭಾಗ್ಯಗಳನ್ನು ಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ಅಥಣಿ ತಾಲೂಕಿನ ಕೆಲವು ಗ್ರಾಮಗಳನ್ನು ಬರಪೀಡಿತ ಗ್ರಾಮಗಳೆಂದು ಘೋಷಿಸಿ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಕೊಡುವ ಮೂಲಕ ಸ್ಪಂದಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು