7:38 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮುಂಗಾರು ಮುಗಿಯುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ!: ಬರದ ಕರಿಛಾಯೆಯಲ್ಲಿ ಜನರ ಬದುಕು!!

04/09/2023, 10:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪ್ರಸಕ್ತ ಸಾಲಿನ ಮುಂಗಾರು ಮುಗಿಯುವ ಮುನ್ನವೇ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ. ರಾಜ್ಯಾದ್ಯಂತ ಈ ಬಾರಿ ಮಳೆ ಪ್ರಮಾಣ ತೀರಾ ಇಳಿಮುಖವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಹೇಳಿ ತೀರದು.


ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರದ ಪರಿಸ್ಥಿತಿ ಏರ್ಪಟ್ಟಿದ್ದು ಸಕಾಲಕ್ಕೆ ಮಳೆಯಾಗದ ಕಾರಣ ಬರದ ಛಾಯೆ ಆವರಿಸಿದೆ. ತಾಲೂಕಿನ ಅಡಹಳ್ಳಿ,ಕೋಹಳ್ಳಿ,ಕಕಮರಿ,ಐಗಳಿ ಸೇರಿದಂತೆ ಕೊಟ್ಟಲಗಿ ಭಾಗದಲ್ಲಿ ಕುಡಿಯುವ ನೀರಿಗೆ ಜನರು ಪರದಾಡುವ ಪರಿಸ್ಥಿತಿ ಎದುರಾಗಿದ್ದು ಕಿಲೋ ಮೀಟರಗಟ್ಟಲೆ ಸಂಚರಿಸಿ ಕುಡಿಯುವ ನೀರು ತರಬೇಕಾಗಿದ್ದು ಮಹಿಳೆಯರು,ಪುರುಷರು ನಿತ್ಯದ ದುಡಿಮೆ ನಿಲ್ಲಿಸಿ ನೀರಿಗಾಗಿ ಅಲೆಯುವಂತಾಗಿದೆ.
ರಾಜ್ಯದ ಜನರಿಗೆ ವಿವಿಧ ಭಾಗ್ಯಗಳನ್ನು ಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ಅಥಣಿ ತಾಲೂಕಿನ ಕೆಲವು ಗ್ರಾಮಗಳನ್ನು ಬರಪೀಡಿತ ಗ್ರಾಮಗಳೆಂದು ಘೋಷಿಸಿ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಕೊಡುವ ಮೂಲಕ ಸ್ಪಂದಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು