8:22 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ

05/08/2023, 13:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು.


ಮುಂಗಾರು ವಿಳಂಬ ಹಿನ್ನೆಲೆ, ಭೀತ್ತನೆ ಕಾರ್ಯ ಮಾಡದೆ ರೈತರು ಕಂಗಾಲಾಗಿದ್ದಾರೆ ದನ- ಕರುಗಳಿಗೆ ಮೇವಿನ ಸಮಸ್ಯೆ ಜ್ವಲಂತವಾಗಿದೆ, ಗಡಿಯಲ್ಲಿ ಸಂಪೂರ್ಣ ಬರ ಆವರಿಸಿ ಜನರು ಗಡಿಭಾಗದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಕೂಡಲೆ ವರದಿ ಸಲ್ಲಿಸಿ ಬರ ಘೋಷಣೆಗೆ ಶಾಸಕ ರಾಜು ಕಾಗೆ ಜಿಲ್ಲಾಧಿಕಾರಿ ಮುಖೇನ ಮನವಿ ಮಾಡಿದ್ದಾರೆ. ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲೆಗೆ ಬರ ಆವರಿಸುವ ಭೀತಿ ಹೆಚ್ಚಾಗಿತ್ತು ಆದರೆ ಮೊನ್ನೆ ಸುರಿದ ಮಳೆಗೆ ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಕಡಿಮೆಯಾಗಿದೆ. ಆದರೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಹೂಬಳಿ ಕ್ಷೇತ್ರಕ್ಕೆ ಮಳೆ ನಿರೀಕ್ಷೆಗಿಂತಲೂ ಕಡಿಮೆ ಆಗಿದೆ ಅಂದಾಜು – 9 ಮಳೆ ವರದಿಯಾಗಿದೆ. ಇದರಿಂದ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಎದುರಾದ ಹಿನ್ನೆಲೆ ಸರ್ಕಾರ ಮಟ್ಟದಲ್ಲಿ ವರದಿ ಸಲ್ಲಿಸಿ, ಪ್ರತಿಶ ಗ್ರಾಮದಲ್ಲೂ ಗೋಶಾಲೆಗಿಂತ ಪ್ರತಿ ಮನೆಗೂ ಮೇವು ಪಶು ಆಹಾರದ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು