12:38 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ

05/08/2023, 13:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು.


ಮುಂಗಾರು ವಿಳಂಬ ಹಿನ್ನೆಲೆ, ಭೀತ್ತನೆ ಕಾರ್ಯ ಮಾಡದೆ ರೈತರು ಕಂಗಾಲಾಗಿದ್ದಾರೆ ದನ- ಕರುಗಳಿಗೆ ಮೇವಿನ ಸಮಸ್ಯೆ ಜ್ವಲಂತವಾಗಿದೆ, ಗಡಿಯಲ್ಲಿ ಸಂಪೂರ್ಣ ಬರ ಆವರಿಸಿ ಜನರು ಗಡಿಭಾಗದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಕೂಡಲೆ ವರದಿ ಸಲ್ಲಿಸಿ ಬರ ಘೋಷಣೆಗೆ ಶಾಸಕ ರಾಜು ಕಾಗೆ ಜಿಲ್ಲಾಧಿಕಾರಿ ಮುಖೇನ ಮನವಿ ಮಾಡಿದ್ದಾರೆ. ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲೆಗೆ ಬರ ಆವರಿಸುವ ಭೀತಿ ಹೆಚ್ಚಾಗಿತ್ತು ಆದರೆ ಮೊನ್ನೆ ಸುರಿದ ಮಳೆಗೆ ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಕಡಿಮೆಯಾಗಿದೆ. ಆದರೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಹೂಬಳಿ ಕ್ಷೇತ್ರಕ್ಕೆ ಮಳೆ ನಿರೀಕ್ಷೆಗಿಂತಲೂ ಕಡಿಮೆ ಆಗಿದೆ ಅಂದಾಜು – 9 ಮಳೆ ವರದಿಯಾಗಿದೆ. ಇದರಿಂದ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಎದುರಾದ ಹಿನ್ನೆಲೆ ಸರ್ಕಾರ ಮಟ್ಟದಲ್ಲಿ ವರದಿ ಸಲ್ಲಿಸಿ, ಪ್ರತಿಶ ಗ್ರಾಮದಲ್ಲೂ ಗೋಶಾಲೆಗಿಂತ ಪ್ರತಿ ಮನೆಗೂ ಮೇವು ಪಶು ಆಹಾರದ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು