6:00 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಕುಡಿಯಲು ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನೇ ಕೊಂದ ಕಿರಾತಕ: ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆ ಕೃತ್ಯ?

03/01/2025, 10:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕುಡಿದು ಹೊಸ ವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡಲು ನಿರಾಕರಿಸಿದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಪಟ್ಟಣದ ಸರಸ್ವತಿ ಕಾಲೋನಿಯಲ್ಲಿ ವಾಸವಿರುವ ಮಹದೇವನಗರದ ನಿವಾಸಿ ಆಟೋ ಡ್ರೈವರ್ ರಫೀಕ್ ಪಾಷ (40) ಎಂಬುವವರೆ ಮೃತ ದುರ್ದೈವಿ.
ಹೊಸ ವರ್ಷದ ಮೊದಲ ದಿನ ಬುಧವಾರ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿರುವ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ ನೀಲಕಂಠನಗರದ ನಿವಾಸಿ ಸಲೀಂ ತನ್ನ ಸ್ನೇಹಿತನ ಜೊತೆ ಬಂದು ಕುಡಿಯಲು ಹಣ ಕೊಡುವಂತೆ ರಫೀಕ್ ಅವರನ್ನು ಪೀಡಿಸಿದ್ದಾನೆ.
ಹಣ ಕೊಡಲು ರಫೀಕ್ ನಿರಾಕರಿಸಿದ್ದಾರೆ. ಈ ವೇಳೆ ಸಲೀಂ ಹಾಗೂ ಸ್ನೇಹಿತ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಗುರುವಾರ ಮೃತಪಟ್ಟಿದ್ದಾರೆ
ಬಿಯರ್ ಬಾಟಲಿನಿಂದ ಹಲ್ಲೆ ನಡೆಸಿ ಕೊಲೆಗೆ ಕಾರಣರಾದ ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತ ಪರಾರಿಯಾಗಿದ್ದಾರೆ.bಮೃತನ ಸಹೋದರ ಸಮೀವುಲ್ಲಾ ನಂಜನಗೂಡು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು