10:26 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕುಡಿಯಲು ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನೇ ಕೊಂದ ಕಿರಾತಕ: ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆ ಕೃತ್ಯ?

03/01/2025, 10:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕುಡಿದು ಹೊಸ ವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡಲು ನಿರಾಕರಿಸಿದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಪಟ್ಟಣದ ಸರಸ್ವತಿ ಕಾಲೋನಿಯಲ್ಲಿ ವಾಸವಿರುವ ಮಹದೇವನಗರದ ನಿವಾಸಿ ಆಟೋ ಡ್ರೈವರ್ ರಫೀಕ್ ಪಾಷ (40) ಎಂಬುವವರೆ ಮೃತ ದುರ್ದೈವಿ.
ಹೊಸ ವರ್ಷದ ಮೊದಲ ದಿನ ಬುಧವಾರ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿರುವ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ ನೀಲಕಂಠನಗರದ ನಿವಾಸಿ ಸಲೀಂ ತನ್ನ ಸ್ನೇಹಿತನ ಜೊತೆ ಬಂದು ಕುಡಿಯಲು ಹಣ ಕೊಡುವಂತೆ ರಫೀಕ್ ಅವರನ್ನು ಪೀಡಿಸಿದ್ದಾನೆ.
ಹಣ ಕೊಡಲು ರಫೀಕ್ ನಿರಾಕರಿಸಿದ್ದಾರೆ. ಈ ವೇಳೆ ಸಲೀಂ ಹಾಗೂ ಸ್ನೇಹಿತ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಗುರುವಾರ ಮೃತಪಟ್ಟಿದ್ದಾರೆ
ಬಿಯರ್ ಬಾಟಲಿನಿಂದ ಹಲ್ಲೆ ನಡೆಸಿ ಕೊಲೆಗೆ ಕಾರಣರಾದ ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತ ಪರಾರಿಯಾಗಿದ್ದಾರೆ.bಮೃತನ ಸಹೋದರ ಸಮೀವುಲ್ಲಾ ನಂಜನಗೂಡು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು