4:41 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ, ಸಾಧನಾ ಪುರಸ್ಕಾರ

20/03/2022, 10:04

ಕಾರವಾರ(reporterkarnataka.com):

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. 

ಮೂರೂರು ಪ್ರಗತಿ ವಿದ್ಯಾಲಯದ ನಿವೃತ್ತ ಮುಖ್ಯಾಧ್ಯಾಪಕ ವಿ. ಆರ್. ಭಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪುಟ್ಟದಾಗಿ ಪ್ರಾರಂಭವಾದ ಸಂಸ್ಥೆ ಎತ್ತರಕ್ಕೆ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಂಸ್ಥೆಯ ವತಿಯಿಂದ ಇನ್ನು ಹೆಚ್ಚೆಚ್ಚು ಸಾಧಕರಿಗೆ ಪುರಸ್ಕರಿಸಿ ಗೌರವಿಸುವಂತೆ ಆಗಲಿ ಎಂದು ಶುಭ ಹಾರೈಸಿದರು. 

ಮೂರೂರು ಕಲ್ಲಬ್ಬೆ ಯ ವಿದ್ಯಾನಿಕೇತನ ಸಂಸ್ಥೆಯ ಕಾರ್ಯಾಧ್ಯಕ್ಷ ಆರ್. ಜಿ. ಭಟ್ಟ  ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಿಸರ್ಗದ ಮಡಿಲಲ್ಲಿ ಸಂಸ್ಕೃತಿಗೆ ಹೆಸರಾದ ಶಾಲೆಯಲ್ಲಿ ತಾವು ಸಹ ಕಲಿತಿರುವ ಘಳಿಗೆಗಳನ್ನು ನೆನೆಸಿಕೊಂಡು ಪ್ರತಿಭೆಗಳಿಗೆ ಪ್ರೋತ್ಸಾಹಿಸುವುದು ತಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದ ಅತಿಥಿಗಳಾಗಿ  ಸಂಸ್ಥೆಯ ಉಪಾಧ್ಯಕ್ಷ  ವಿ. ಎಸ್. ಹೆಗಡೆ, ಕಾರ್ಯದರ್ಶಿ

 ಟಿ. ಎಸ್. ಭಟ್ಟ, ವಿದ್ಯಾರ್ಥಿನಿಲಯದ ಸಂಚಾಲಕ

 ಐ. ಪಿ. ಭಟ್ಟ ಉಪಸ್ಥಿತರಿದ್ದು ಮಾತನಾಡಿ ಇನ್ನಷ್ಟು ಹೆಚ್ಚೆಚ್ಚು ಪ್ರೋತ್ಸಾಹಕರು ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರಕ್ಕೆ ಸಿಗುವಂತಾಗಲಿ, ಸಾಧಕರಿಗೆ ಮಾರ್ಗದರ್ಶಕರಾಗಲಿ ಎಂದು ಶುಭಕೋರಿದರು. ಶಿಕ್ಷಣ ಸಮಿತಿಯ ಸಂಚಾಲಕ

 ಟಿ. ಆರ್. ಜೋಷಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಪ್ರೋತ್ಸಾಹಿಸಿ ತುಂಬುವ ಕಾರ್ಯ ಇದಾಗಿದೆ ಎಂದರು. ಪ್ರಗತಿ ವಿದ್ಯಾಲಯ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. 

ಪ್ರಗತಿ ವಿದ್ಯಾಲಯ ಆಂಗ್ಲಮಾಧ್ಯಮ ಪ್ರೌಢ ವಿಭಾಗದ ಮುಖ್ಯಾಧ್ಯಾಪಕ ವಿವೇಕ ಆಚಾರಿ, ಪ್ರಗತಿ ವಿದ್ಯಾಲಯ ಕನ್ನಡ ಮಾಧ್ಯಮ ವಿಭಾಗದ ಮುಖ್ಯಾಧ್ಯಾಪಕರ ವಿ. ಎಸ್. ಗೌಡ ಉಪಸ್ಥಿತರಿದ್ದರು. ಸಂಸ್ಥೆಯ ಸರ್ವ ಸದಸ್ಯರು, ಶಾಲಾ ಶಿಕ್ಷಕ ವೃಂದ, ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು. ಶ್ರೀಧರ ಸಂಸ್ಕೃತ ಪಾಠಶಾಲೆಯ ಮುಖ್ಯಾಧ್ಯಾಪಕ ಶ್ರೀಪಾದ್ ಭಟ್ಟ ಸ್ವಾಗತಿಸಿದರು. ಪ್ರಗತಿ ವಿದ್ಯಾಲಯ ಪ್ರಾಥಮಿಕ ವಿಭಾಗದ ಮುಖ್ಯಾಧ್ಯಾಪಕಿ ನಾಗವೇಣಿ ಭಟ್ಟ

ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು