11:17 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮುರ್ಡೇಶ್ವರ: ಸಮುದ್ರಕ್ಕಿಳಿದ 7 ಮಂದಿ ಶಾಲಾ ವಿದ್ಯಾರ್ಥಿನಿಯ ಪೈಕಿ 4 ಮಂದಿ ನೀರುಪಾಲು; ಪ್ರವಾಸಕ್ಕೆ ಬಂದಿದ್ದ ಮುಳಬಾಗಿಲಿನ ಮಕ್ಕಳು

10/12/2024, 22:01

ಅನುಷಾ ಶಿರಾಲಿ ಕಾರವಾರ

info.reporterkarnataka@gmail.com

ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ.
ಸಂಜೆ ವೇಳೆ ಕಡಲ ತೀರದಲ್ಲಿ ಆಟವಾಡುತ್ತಿದ್ದ ಕೋಲಾರ ಜಿಲ್ಲೆಯಿಂದ ಆಗಮಿಸಿದ್ದ 46 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕಿಯರು ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ಮಕ್ಕಳಿಗಾಗಿ ಶೋಧ ಕಾರ್ಯ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. 7 ಮಂದಿ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂವರು ವಿದ್ಯಾರ್ಥಿನಿಯರಾದ ಯಶೋದಾ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃತದೇಹವನ್ನು ಹೊರತೆಗೆಯಲಾಗಿದೆ. ಸಮುದ್ರ ಪಾಲಾದ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷಾ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನಾ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು