10:22 PM Saturday20 - September 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

ಇತ್ತೀಚಿನ ಸುದ್ದಿ

ಮುರ್ಡೇಶ್ವರ: ಸಮುದ್ರಕ್ಕಿಳಿದ 7 ಮಂದಿ ಶಾಲಾ ವಿದ್ಯಾರ್ಥಿನಿಯ ಪೈಕಿ 4 ಮಂದಿ ನೀರುಪಾಲು; ಪ್ರವಾಸಕ್ಕೆ ಬಂದಿದ್ದ ಮುಳಬಾಗಿಲಿನ ಮಕ್ಕಳು

10/12/2024, 22:01

ಅನುಷಾ ಶಿರಾಲಿ ಕಾರವಾರ

info.reporterkarnataka@gmail.com

ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ.
ಸಂಜೆ ವೇಳೆ ಕಡಲ ತೀರದಲ್ಲಿ ಆಟವಾಡುತ್ತಿದ್ದ ಕೋಲಾರ ಜಿಲ್ಲೆಯಿಂದ ಆಗಮಿಸಿದ್ದ 46 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕಿಯರು ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ಮಕ್ಕಳಿಗಾಗಿ ಶೋಧ ಕಾರ್ಯ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. 7 ಮಂದಿ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂವರು ವಿದ್ಯಾರ್ಥಿನಿಯರಾದ ಯಶೋದಾ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃತದೇಹವನ್ನು ಹೊರತೆಗೆಯಲಾಗಿದೆ. ಸಮುದ್ರ ಪಾಲಾದ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷಾ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನಾ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು