4:37 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮುರ್ಡೇಶ್ವರ: ಸಮುದ್ರಕ್ಕಿಳಿದ 7 ಮಂದಿ ಶಾಲಾ ವಿದ್ಯಾರ್ಥಿನಿಯ ಪೈಕಿ 4 ಮಂದಿ ನೀರುಪಾಲು; ಪ್ರವಾಸಕ್ಕೆ ಬಂದಿದ್ದ ಮುಳಬಾಗಿಲಿನ ಮಕ್ಕಳು

10/12/2024, 22:01

ಅನುಷಾ ಶಿರಾಲಿ ಕಾರವಾರ

info.reporterkarnataka@gmail.com

ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ.
ಸಂಜೆ ವೇಳೆ ಕಡಲ ತೀರದಲ್ಲಿ ಆಟವಾಡುತ್ತಿದ್ದ ಕೋಲಾರ ಜಿಲ್ಲೆಯಿಂದ ಆಗಮಿಸಿದ್ದ 46 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕಿಯರು ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ಮಕ್ಕಳಿಗಾಗಿ ಶೋಧ ಕಾರ್ಯ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. 7 ಮಂದಿ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂವರು ವಿದ್ಯಾರ್ಥಿನಿಯರಾದ ಯಶೋದಾ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃತದೇಹವನ್ನು ಹೊರತೆಗೆಯಲಾಗಿದೆ. ಸಮುದ್ರ ಪಾಲಾದ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷಾ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನಾ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು