10:02 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ…

ಇತ್ತೀಚಿನ ಸುದ್ದಿ

ಮಸ್ಕಿ: ದುಷ್ಕರ್ಮಿಗಳಿಂದ ಬೆನಕನಾಳ ಗೃಹರಕ್ಷಕ ಸಿಬ್ಬಂದಿಯ ಮನೆ, ಬೈಕ್‌ಗೆ ಬೆಂಕಿ

30/06/2026, 23:05

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಬೆನಕನಾಳ ಗ್ರಾಮದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದ್ದು,ಗೃಹ ರಕ್ಷಕ (ಹೋಂ ಗಾರ್ಡ್) ಸಿಬ್ಬಂದಿಯೊಬ್ಬರ ಮನೆ ಹಾಗೂ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

*ಘಟನೆಯ ವಿವರ:*
ಬೆನಕನಾಳ ಗ್ರಾಮದ ನಿವಾಸಿಯಾದ, ನಾಗಪ್ಪ ಅವರ ಪುತ್ರ ನರಸಿಂಹ ನಾಯಕ್ ಎಂಬುವರು ಗೃಹ ರಕ್ಷಕರ ದಳದಲ್ಲಿ (ಹೋಂ ಗಾರ್ಡ್) ಸೇವೆ ಸಲ್ಲಿಸುತ್ತಿದ್ದಾರೆ.


ಎಂದಿನಂತೆ ರಾತ್ರಿ ಮನೆಯವರು ಮಲಗಿದ್ದ ವೇಳೆ ಬಂದ ಮುಸುಕುಧಾರಿ ಅಥವಾ ಅಪರಿಚಿತ ದುಷ್ಕರ್ಮಿಗಳು, ಇವರ ಮನೆ ಹಾಗೂ ಹೊರಗಡೆ ನಿಲ್ಲಿಸಲಾಗಿದ್ದ ಬೈಕ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

*ಸಂಪೂರ್ಣ ಭಸ್ಮ:* ಬೆಂಕಿಯ ಜ್ವಾಲೆ ತೀವ್ರವಾಗಿದ್ದರಿಂದ ನರಸಿಂಹ ನಾಯಕ್ ಅವರಿಗೆ ಸೇರಿದ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,ಮನೆಗೂ ಕೂಡ ಭಾರೀ ಹಾನಿಯಾಗಿದೆ. ತಡರಾತ್ರಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಸ್ಥಳೀಯರು ತಕ್ಷಣ ಎಚ್ಚೆತ್ತುಕೊಂಡು ಬೆಂಕಿ ನಂದಿಸಲು ಯತ್ನಿಸಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.

*ಆತಂಕದಲ್ಲಿ ಗ್ರಾಮಸ್ಥರು:* ಕಾನೂನು ಸುವ್ಯವಸ್ಥೆ ಕಾಪಾಡಲು ನೆರವಾಗುವ ಗೃಹ ರಕ್ಷಕ ಸಿಬ್ಬಂದಿಯ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದು ಬೆನಕನಾಳ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹಳೇ ವೈಷಮ್ಯ ಅಥವಾ ಇನ್ಯಾವುದೋ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆಯೇ ಎಂಬ ಸಂಶಯ ವ್ಯಕ್ತವಾಗಿದೆ.
ಸ್ಥಳಕ್ಕೆ ಮಸ್ಕಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು,ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು