2:13 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಸ್ಕಿ: ಸಡಗರ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಚಿನ್ನರ ಜತೆ ಕುಣಿದು ಕುಪ್ಪಳಿಸಿದ ಶಾಸಕ ತುರುವಿಹಾಳ

02/11/2025, 08:22

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಕನ್ನಡ ಬಾವುಟ ಹಿಡಿದು ಮನಸಾರೆ ಕುಣಿದು ಕುಪ್ಪಳಿಸಿದರು.
ಕನ್ನಡ ಪರ ಸಂಘಟನೆಗಳು ಮಸ್ಕಿ ಪಟ್ಟಣವನ್ನು ಶೃಂಗರಿಸಿ, ಮದುಮಗಳ ದುಬ್ಬಣ ದಂತೆ ಸಂಭ್ರಮ ಆಚರಣೆ ನಡೆಸಿತು.
ಪುರಸಭೆ ಮುಖ್ಯ ಅಧಿಕಾರಿ ನರಸಾ ರೆಡ್ಡಿ, ಅಧ್ಯಕ್ಷ ಅಂಬಾಡಿ ಮಲ್ಲಯ್ಯ ಸಿಬ್ಬಂದಿ ವರ್ಗ ಪುರಸಭೆಯಲ್ಲಿ ಧ್ವಜಾರೋಹಣ ಮಾಡಿದರು.


ಅಶೋಕ ವೃತ್ತದಲ್ಲಿ ಬಸವರಾಜ ಡಿ. ಉದ್ಬಾಳ್ ಧ್ವಜಾರೋಹಣ ಮಾಡಿದರು.
ಕಾರ್ಯಕ್ರಮದ ಕನ್ನಡ ಬಾವುಟ ಧ್ವಜಾರೋಹಣ ವನ್ನು ಜಯ ಕರ್ನಾಟಕ ಸಂಘಟನೆ ಮಸ್ಕಿ ತಾಲೂಕು ಸಮಿತಿ ವತಿಯಿಂದ ಕವಿತಾಳ ವೃತ್ತದಲ್ಲಿ ತಾಲೂಕು ಅಧ್ಯಕ್ಷರಾದ ಕಿರಣ್ ವಿ ಮುರಾರಿ ಯವರು ನೆರವೇರಿಸಿದರು.
ತುಂಗಭದ್ರಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಮುದ್ದಾಪುರನಲ್ಲಿ ಇರುವ ತುಂಗಭದ್ರಾ ಪದವಿ ಪೂರ್ವ ಕಾಲೇಜಿನಲ್ಲಿ 69 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಾಮಣ್ಣ ನಾಯಕ, ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ, ಉಪನ್ಯಾಸಕರಾದ ಶಂಕ್ರಪ್ಪ, ಅಕ್ಕಮಹಾದೇವಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಎಲ್ಲೆಡೆ ಕನ್ನಡದ ಬಾವುಟ ಸಂಭ್ರಮ ಕಂಡು ಬಂದಿತು.

ಇತ್ತೀಚಿನ ಸುದ್ದಿ

ಜಾಹೀರಾತು