6:01 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಸ್ಕಿ: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಕತ್ತು ಸೀಳಿ ಭೀಕರ ಕೊಲೆ; ಆರೋಪಿ ಬಂಧನ

03/09/2025, 13:04

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀರ್ಗಿ ಗ್ರಾಮದ ನಿವಾಸಿ ಗಂಗಮ್ಮ(30) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.
ಆಟೋ ಡ್ರೈವರ್ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಸಂಶಯದ ಮೇಲೆ ಗಂಡ ಯಲ್ಲಪ್ಪ ಎಂಬಾತ ಗಂಗಮ್ಮನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಇವರ ಮದುವೆಯಾಗಿ 12 ವರ್ಷ ಕಳೆದಿದೆ. ಮೂರು ಜನ ಮಕ್ಕಳು ಕೂಡ ಇದ್ದಾರೆ. ಗಂಡನ ಮಾರಣಾಂತಿಕ ಹಲ್ಲೆ ಯಿಂದ ತಪ್ಪಿಸಿಕೊಳ್ಳಲು ಮಹಿಳೆ 100 ಮೀಟರ್ ನಷ್ಟು ದೂರ ಓಡಿಕೊಂಡು ಬಂದು ಪ್ರಾಣ ಬಿಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ಲಕ್ಕಮ್ ಭೇಟಿ ನೀಡಿ ಆರೋಪಿ ಗಂಡನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು