5:31 PM Thursday13 - March 2025
ಬ್ರೇಕಿಂಗ್ ನ್ಯೂಸ್
Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ:… ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್… Budget Session | ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10… ಕೆಎಎಸ್ ಮರು ಪರೀಕ್ಷೆ ಕೋರ್ಟ್ ಆದೇಶದ ಮೇಲೆ ಅವಲಂಬಿತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tourism | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ… ಕರಾವಳಿಗೆ ತಂಪೆರಚಿದ ವರ್ಷಧಾರೆ: ಮಂಗಳೂರಿನಲ್ಲಿ ಸಾಧಾರಣ ಮಳೆ; ಬೆಳ್ತಂಗಡಿಯಲ್ಲಿ ಆಲಿಕಲ್ಲು ಸುರಿಮಳೆ ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಬಿಟ್ಟು ಹೋದ ತಂದೆ!!: ಹಠಕ್ಕೆ ಬಿದ್ದು ‘ಕಿಕ್ ಬಾಕ್ಸರ್’ ಆದ… Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ… KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಇತ್ತೀಚಿನ ಸುದ್ದಿ

ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ

13/03/2025, 11:19

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹಾಗೂ ಬಂಗ್ಲೆ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ತಾಲೂಕ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರ ನೇತೃತ್ವದಲ್ಲಿ ಆಟೋ ಸ್ಟ್ಯಾಂಡ್ ಬಳಿ ಕುಡಿಯುವ ನೀರಿನ ಅರವಟ್ಟಿಗೆಗೆ ಪುರಸಭೆ ಕೌನ್ಸಿಲರ್ ಶರಣಯ್ಯ ಸ್ವಾಮಿ ಸೋಪ್ಪಿಮಠ ಅವರು ಚಾಲನೆ ನೀಡಿದರು.


ಮಹಾ ಮಂಗಳಾರತಿಯೊಂದಿಗೆ ನೀರಿನ ಅರವಟ್ಟಿಗೆ ಪ್ರಾರಂಭ ಮಾಡಲಾಯಿತು. ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ, ಬಂಗ್ಲೆ
ಮಲ್ಲಿಕಾರ್ಜುನ್ ಅವರ ಆದೇಶದಂತೆ ಬೇಸಿಗೆ ದಿನದಲ್ಲಿ ಜನರಿಗೆ ಸಹಾಯವಾಗುವ ದೃಷ್ಟಿಯಲ್ಲಿ ತಂಪು ಪಾನಿಯನ್ನು ಎಲ್ಲರೂ ನೀಡಲಾಗುತ್ತದೆ. ಬಂಗ್ಲೆ ಮಲ್ಲಿಕಾರ್ಜುನ್ ಅವರ ಕನಸು ನನಸಾಗಲಿ. ಇದು ಮೂರನೇ ವರ್ಷದ ನೀರಿನ ಅರವಟ್ಟಿಗೆಯಾಗಿದೆ. ಪ್ರಥಮ ವರ್ಷ ಮುದುಗಲ್ ಕ್ರಾಸಿನಲ್ಲಿ ಮಾಡಲಾಯಿತು. ಎರಡನೇ ವರ್ಷ ಅಂತರಗಂಗೆ ಬಸವೇಶ್ವರ ಸರ್ಕಲ್ ನಲ್ಲಿ ಮಾಡಲಾಯಿತು. ಬಂಗ್ಲೆ ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ. ಅವರ ಪ್ರತಿಯೊಂದು ಕೆಲಸ ಹಿಂದೆ ಭಗವಂತನು ಇರುತ್ತಾನೆ
ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಮಾಡುತಿದ್ದೇವೆ. ಸದಾ ಕಾಲ ಹೀಗೆ ನಡೆಯಲಿ ಎಂದು ಹೇಳಿದರು.
ಪುರಸಭೆ ಸದಸ್ಯ ಪಂಪಣ್ಣ ಧನ ಶೆಟ್ಟಿ , ವಸಂತ ವೆಂಕಟಪುರ, ವಿರೂಪಾಕ್ಷಯ್ಯ ಸ್ವಾಮಿ, ಉಮೇಶ್ , ವೀರೇಶ್, ಧನಶೆಟ್ಟಿ , ವಿಶ್ವನಾಥ ಬಸವರಾಜ್ ಸಜ್ಜನ್ ಸೇರಿದಂತೆ ಇನ್ನು ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು