10:52 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ

13/03/2025, 11:19

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹಾಗೂ ಬಂಗ್ಲೆ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ತಾಲೂಕ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರ ನೇತೃತ್ವದಲ್ಲಿ ಆಟೋ ಸ್ಟ್ಯಾಂಡ್ ಬಳಿ ಕುಡಿಯುವ ನೀರಿನ ಅರವಟ್ಟಿಗೆಗೆ ಪುರಸಭೆ ಕೌನ್ಸಿಲರ್ ಶರಣಯ್ಯ ಸ್ವಾಮಿ ಸೋಪ್ಪಿಮಠ ಅವರು ಚಾಲನೆ ನೀಡಿದರು.


ಮಹಾ ಮಂಗಳಾರತಿಯೊಂದಿಗೆ ನೀರಿನ ಅರವಟ್ಟಿಗೆ ಪ್ರಾರಂಭ ಮಾಡಲಾಯಿತು. ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ, ಬಂಗ್ಲೆ
ಮಲ್ಲಿಕಾರ್ಜುನ್ ಅವರ ಆದೇಶದಂತೆ ಬೇಸಿಗೆ ದಿನದಲ್ಲಿ ಜನರಿಗೆ ಸಹಾಯವಾಗುವ ದೃಷ್ಟಿಯಲ್ಲಿ ತಂಪು ಪಾನಿಯನ್ನು ಎಲ್ಲರೂ ನೀಡಲಾಗುತ್ತದೆ. ಬಂಗ್ಲೆ ಮಲ್ಲಿಕಾರ್ಜುನ್ ಅವರ ಕನಸು ನನಸಾಗಲಿ. ಇದು ಮೂರನೇ ವರ್ಷದ ನೀರಿನ ಅರವಟ್ಟಿಗೆಯಾಗಿದೆ. ಪ್ರಥಮ ವರ್ಷ ಮುದುಗಲ್ ಕ್ರಾಸಿನಲ್ಲಿ ಮಾಡಲಾಯಿತು. ಎರಡನೇ ವರ್ಷ ಅಂತರಗಂಗೆ ಬಸವೇಶ್ವರ ಸರ್ಕಲ್ ನಲ್ಲಿ ಮಾಡಲಾಯಿತು. ಬಂಗ್ಲೆ ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ. ಅವರ ಪ್ರತಿಯೊಂದು ಕೆಲಸ ಹಿಂದೆ ಭಗವಂತನು ಇರುತ್ತಾನೆ
ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಮಾಡುತಿದ್ದೇವೆ. ಸದಾ ಕಾಲ ಹೀಗೆ ನಡೆಯಲಿ ಎಂದು ಹೇಳಿದರು.
ಪುರಸಭೆ ಸದಸ್ಯ ಪಂಪಣ್ಣ ಧನ ಶೆಟ್ಟಿ , ವಸಂತ ವೆಂಕಟಪುರ, ವಿರೂಪಾಕ್ಷಯ್ಯ ಸ್ವಾಮಿ, ಉಮೇಶ್ , ವೀರೇಶ್, ಧನಶೆಟ್ಟಿ , ವಿಶ್ವನಾಥ ಬಸವರಾಜ್ ಸಜ್ಜನ್ ಸೇರಿದಂತೆ ಇನ್ನು ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು