11:35 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ

13/03/2025, 11:19

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹಾಗೂ ಬಂಗ್ಲೆ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ತಾಲೂಕ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರ ನೇತೃತ್ವದಲ್ಲಿ ಆಟೋ ಸ್ಟ್ಯಾಂಡ್ ಬಳಿ ಕುಡಿಯುವ ನೀರಿನ ಅರವಟ್ಟಿಗೆಗೆ ಪುರಸಭೆ ಕೌನ್ಸಿಲರ್ ಶರಣಯ್ಯ ಸ್ವಾಮಿ ಸೋಪ್ಪಿಮಠ ಅವರು ಚಾಲನೆ ನೀಡಿದರು.


ಮಹಾ ಮಂಗಳಾರತಿಯೊಂದಿಗೆ ನೀರಿನ ಅರವಟ್ಟಿಗೆ ಪ್ರಾರಂಭ ಮಾಡಲಾಯಿತು. ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ, ಬಂಗ್ಲೆ
ಮಲ್ಲಿಕಾರ್ಜುನ್ ಅವರ ಆದೇಶದಂತೆ ಬೇಸಿಗೆ ದಿನದಲ್ಲಿ ಜನರಿಗೆ ಸಹಾಯವಾಗುವ ದೃಷ್ಟಿಯಲ್ಲಿ ತಂಪು ಪಾನಿಯನ್ನು ಎಲ್ಲರೂ ನೀಡಲಾಗುತ್ತದೆ. ಬಂಗ್ಲೆ ಮಲ್ಲಿಕಾರ್ಜುನ್ ಅವರ ಕನಸು ನನಸಾಗಲಿ. ಇದು ಮೂರನೇ ವರ್ಷದ ನೀರಿನ ಅರವಟ್ಟಿಗೆಯಾಗಿದೆ. ಪ್ರಥಮ ವರ್ಷ ಮುದುಗಲ್ ಕ್ರಾಸಿನಲ್ಲಿ ಮಾಡಲಾಯಿತು. ಎರಡನೇ ವರ್ಷ ಅಂತರಗಂಗೆ ಬಸವೇಶ್ವರ ಸರ್ಕಲ್ ನಲ್ಲಿ ಮಾಡಲಾಯಿತು. ಬಂಗ್ಲೆ ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ. ಅವರ ಪ್ರತಿಯೊಂದು ಕೆಲಸ ಹಿಂದೆ ಭಗವಂತನು ಇರುತ್ತಾನೆ
ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಮಾಡುತಿದ್ದೇವೆ. ಸದಾ ಕಾಲ ಹೀಗೆ ನಡೆಯಲಿ ಎಂದು ಹೇಳಿದರು.
ಪುರಸಭೆ ಸದಸ್ಯ ಪಂಪಣ್ಣ ಧನ ಶೆಟ್ಟಿ , ವಸಂತ ವೆಂಕಟಪುರ, ವಿರೂಪಾಕ್ಷಯ್ಯ ಸ್ವಾಮಿ, ಉಮೇಶ್ , ವೀರೇಶ್, ಧನಶೆಟ್ಟಿ , ವಿಶ್ವನಾಥ ಬಸವರಾಜ್ ಸಜ್ಜನ್ ಸೇರಿದಂತೆ ಇನ್ನು ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು