2:00 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ

13/03/2025, 11:19

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹಾಗೂ ಬಂಗ್ಲೆ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ತಾಲೂಕ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರ ನೇತೃತ್ವದಲ್ಲಿ ಆಟೋ ಸ್ಟ್ಯಾಂಡ್ ಬಳಿ ಕುಡಿಯುವ ನೀರಿನ ಅರವಟ್ಟಿಗೆಗೆ ಪುರಸಭೆ ಕೌನ್ಸಿಲರ್ ಶರಣಯ್ಯ ಸ್ವಾಮಿ ಸೋಪ್ಪಿಮಠ ಅವರು ಚಾಲನೆ ನೀಡಿದರು.


ಮಹಾ ಮಂಗಳಾರತಿಯೊಂದಿಗೆ ನೀರಿನ ಅರವಟ್ಟಿಗೆ ಪ್ರಾರಂಭ ಮಾಡಲಾಯಿತು. ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ, ಬಂಗ್ಲೆ
ಮಲ್ಲಿಕಾರ್ಜುನ್ ಅವರ ಆದೇಶದಂತೆ ಬೇಸಿಗೆ ದಿನದಲ್ಲಿ ಜನರಿಗೆ ಸಹಾಯವಾಗುವ ದೃಷ್ಟಿಯಲ್ಲಿ ತಂಪು ಪಾನಿಯನ್ನು ಎಲ್ಲರೂ ನೀಡಲಾಗುತ್ತದೆ. ಬಂಗ್ಲೆ ಮಲ್ಲಿಕಾರ್ಜುನ್ ಅವರ ಕನಸು ನನಸಾಗಲಿ. ಇದು ಮೂರನೇ ವರ್ಷದ ನೀರಿನ ಅರವಟ್ಟಿಗೆಯಾಗಿದೆ. ಪ್ರಥಮ ವರ್ಷ ಮುದುಗಲ್ ಕ್ರಾಸಿನಲ್ಲಿ ಮಾಡಲಾಯಿತು. ಎರಡನೇ ವರ್ಷ ಅಂತರಗಂಗೆ ಬಸವೇಶ್ವರ ಸರ್ಕಲ್ ನಲ್ಲಿ ಮಾಡಲಾಯಿತು. ಬಂಗ್ಲೆ ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ. ಅವರ ಪ್ರತಿಯೊಂದು ಕೆಲಸ ಹಿಂದೆ ಭಗವಂತನು ಇರುತ್ತಾನೆ
ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಮಾಡುತಿದ್ದೇವೆ. ಸದಾ ಕಾಲ ಹೀಗೆ ನಡೆಯಲಿ ಎಂದು ಹೇಳಿದರು.
ಪುರಸಭೆ ಸದಸ್ಯ ಪಂಪಣ್ಣ ಧನ ಶೆಟ್ಟಿ , ವಸಂತ ವೆಂಕಟಪುರ, ವಿರೂಪಾಕ್ಷಯ್ಯ ಸ್ವಾಮಿ, ಉಮೇಶ್ , ವೀರೇಶ್, ಧನಶೆಟ್ಟಿ , ವಿಶ್ವನಾಥ ಬಸವರಾಜ್ ಸಜ್ಜನ್ ಸೇರಿದಂತೆ ಇನ್ನು ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು