6:48 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಮುಸ್ಲಿಂ ಬಾಂಧವ್ಯ ವೇದಿಕೆಯ ಆಶ್ರಯದಲ್ಲಿ ಅಲ್ಪಸಂಖ್ಯಾತ ಹಕ್ಕುಗಳ ಮಾಹಿತಿ ಶಿಬಿರ

21/02/2023, 11:57

ಮಂಗಳೂರು(reporterkarnataka.com): ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಮತ್ತು ರಾಜಕೀಯ ಬಲವರ್ಧನೆಯ ಬಗ್ಗೆ ಫಾರಂ ಫಾರ್ ಮೈನಾರಿಟಿ ರೈಟ್ಸ್ , ಡೆಮಾಕ್ರಟಿಕ್ ಆ್ಯಂಡ್ ಪೊಲಿಟಿಕಲ್ ಎಂಪವರ್ ಮೆಂಟ್ ಬೆಂಗಳೂರು ಮತ್ತು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇವರ ಆಶ್ರಯದಲ್ಲಿ ನಗರದ ಹಂಪನಕಟ್ಟೆಯ ಆಶೀರ್ವಾದ್ ಹಾಲ್ ನಲ್ಲಿ ಅಲ್ಪಸಂಖ್ಯಾತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಅಧ್ಯಕ್ಷತೆ ವಹಿಸಿದ ಫಾರಂ ಫಾರ್ ಮೈನಾರಿಟಿ ಇದರ ಅಧ್ಯಕ್ಷ ಮೆಹರೋಜ್ ಖಾನ್ ” ಅಲ್ಪಸಂಖ್ಯಾತರು ದೇಶದ ರಾಜಕಾರಣದಲ್ಲಿ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಕ್ರಿಯಾಶೀಲ ಭೂಮಿಕೆ ನಿಭಾಯಿಸಬೇಕು. ರಾಜಕೀಯ ಕಾರಣದಿಂದ ಸಮಾಜದಲ್ಲಿ ಸೃಷ್ಟಿಯಾಗಿರುವ ಅನಗತ್ಯ ಅಂತರವನ್ನು ನಿವಾರಿಸಲು ಬಹುಸಂಖ್ಯಾತ ಸಮುದಾಯದೊಂದಿಗೆ ಸೌಹಾರ್ದ ಸ್ಥಾಪಿಸುವ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ರಾಜಕಾರಣಿಗಳ ಕೋಮು ಧ್ರುವೀಕರಣದ ರಾಜಕೀಯವನ್ನು ವಿಫಲಗೊಳಿಸಬೇಕು” ಎಂದು ಹೇಳಿದರು.

ಮುಸ್ಲಿಂ ಬಾಂಧವ್ಯ ವೇದಿಕೆಯ ಅಧ್ಯಕ್ಷ ಯಾಸೀನ್ ಶಿರೂರ್ ಮಾತನಾಡಿ” ನಾಡಿನ ಸಾಮರಸ್ಯ ಮತ್ತು ಶಾಂತಿಗಾಗಿ ವೇದಿಕೆ ನಿರಂತರ ಶ್ರಮಿಸಲಿದೆ. ಸಮುದಾಯಗಳ ನಡುವೆ ಕಾಲಕಾಲಕ್ಕೆ ಮೂಡುವ ಅಪನಂಬಿಕೆಯನ್ನು ಹೋಗಲಾಡಿಸುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ. ಮುಸ್ಲಿಂ ಬಾಂಧವ್ಯ ವೇದಿಕೆಯು ಲೇಖಕರು ಚಿಂತಕರು ಸಾಹಿತಿಗಳ ವೇದಿಕೆಯಾಗಿರುವುದು ಮಾತ್ರವಲ್ಲ ಕರ್ನಾಟಕದಲ್ಲಿ ಈ ಸ್ವರೂಪದ ಪ್ರಪ್ರಥಮ ವೇದಿಕೆಯಾಗಿದ್ದು ಮುಂಬರುವ ದಿನಗಳಲ್ಲಿ ಸಮಾಜದಲ್ಲಿ ಬಹಳ ಕ್ರಿಯಾಶೀಲ ಭೂಮಿಕೆ ನಿಭಾಯಿಸಲಿದೆ” ಎಂದು ಹೇಳಿದರು. ಮಾಹಿತಿ ಶಿಬಿರದಲ್ಲಿ ಸುರತ್ಕಲ್ ಮಾಜಿ ಶಾಸಕ ಮೊಯಿದ್ದೀನ್ ಬಾವ, ಮಾಜಿ ಮೇಯರ್ ಅಶ್ರಫ್, ಉಡುಪಿಯ ಅಲ್ ಇಬಾದ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಬ್ದುಲ್ ಲತೀಫ್ ಮದನಿ, ಬಾಂಧವ್ಯ ವೇದಿಕೆಯ ಕಾರ್ಯದರ್ಶಿ ನಿಸಾರ್ ಆಹಮದ್, ಉಮರ್ ಕುಂಇ್ ಸಾಲೆತ್ತೂರ್, ಹಬೀಬ್ ಖಾದರ್, ಶರ್ಫುದ್ದೀನ್ ಕಾಪು, ಮುಬೀನ್ ಸುಳ್ಯ, ಶಬೀರ್ ಆಹ್ಮದ್, ಆರ್ ಎ ಲೋಹಾನಿ, ಎ ಕೆ ಕುಕ್ಕಿಲ,ಅಶ್ರಫ್ ಕುಂದಾಪುರ, ಇಖ್ಬಾಲ್ ಹಾಲಾಡಿ, ರಶೀದ್ ಊಬರ್, ಅಜೀಜ್ ಆಹ್ಮದ್ ಉಡುಪಿ, ಯು ಟಿ ಇರ್ಷಾದ್, ಸೈಫ್ ಬಜಪೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು