9:03 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಸ್ಟಡಿಹೌಸ್ ನಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ: ಚಾಕುವಿನಿಂದ ಹಲ್ಲೆ

04/09/2021, 00:06

ಮೈಸೂರು (reporterkarnataka.com):

ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸಾಂಸ್ಕೃತಿಕ ನಗರಿಯಲ್ಲಿ ಮತ್ತೊಂದು ತಲೆ ತಗ್ಗಿಸುವ ಘಟನೆ ನಡೆದಿದೆ. ಸ್ಟಡಿ ಹೌಸ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ.

ಸ್ಟಡಿ ಹೌಸ್ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆಗೈದು ಪರಾರಿಯಾಗಿದ್ದಾರೆ. ಸ್ಟಡಿ ಹೌಸ್ ನಲ್ಲಿ ಆಂಧ್ರಪ್ರದೇಶದ 7 ಮಂದಿ ವಿದ್ಯಾರ್ಥಿನಿಯರು ಇದ್ದರು. ಘಟನೆ ನಡೆದ ಸಂದರ್ಭದಲ್ಲಿ ಉಳಿದ

ವಿದ್ಯಾರ್ಥಿನಿಯರು ತರಗತಿಗೆ ಹೋಗಿದ್ದರು. 

ಒಬ್ಬಳೇ ವಿದ್ಯಾರ್ಥಿನಿ ಇರುವುದನ್ನು ಗಮನಿಸಿ ಅತ್ಯಾಚಾರಕ್ಕೆ ಯತ್ನಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಯುವತಿಯನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಘಟನಾ ಸ್ಥಳಕ್ಕೆನರಸಿಂಹರಾಜ ಠಾಣೆಯ ಪೊಲೀಸರು ಹಾಗೂ  ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು