4:20 AM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮೂತ್ರಜನಕಾಂಗದ ಸೋಂಕು: ಕಾರಣಗಳೇನು? ಇದನ್ನು ತಡೆಗಟ್ಟುವುದು ಹೇಗೆ?

05/02/2022, 11:22

ಮೂತ್ರ ಜನಕಾಂಗದ ಸೋಂಕು ಮಹಿಳೆಯರು ಮತ್ತು ಪುರುಷರನ್ನು ಕಾಡುವ ಸಾಮಾನ್ಯವಾದ ಸೊಂಕಾಗಿದೆ. ಆದರೆ ಹೆಚ್ಚಾಗಿ ಮಹಿಳೆಯರಲ್ಲಿ ಕಂಡು ಬರುತ್ತದೆ.
ಮೂತ್ರನಾಳ, ಮೂತ್ರಚೀಲ, ಅಥವಾ ಕಿಡ್ನಿ  ಹೀಗೆ ಬೇರೆ ಬೇರೆ ಭಾಗ ಸೊಂಕಿಗೆ ಒಳಗಾಗಬಹುದು.


ಕಾರಣಗಳು ಏನು?

ಇದು ಹೆಚ್ಚಾಗಿ ಬ್ಯಾಕ್ಟರಿಯ ಅಥವಾ ಫಂಗಸ್ನಿಂದಾಗಿ ಬರುವ ತೊಂದರೆಯಾಗಿದೆ. ಈ ಸೂಕ್ಷ್ಮಣು ಜೀವಿಗಳು ಮೂತ್ರ ನಳಿಕೆಯ ಮೂಲಕ ದೇಹವನ್ನು ಪ್ರವೇಶಿಸಿ ಸೋಂಕು ತಗಲುತ್ತದೆ.

ಮಧುಮೇಹ ಇರುವವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಇಂತಹ ಸೋಂಕು ಸುಲಭವಾಗಿ ತಗಲುತ್ತದೆ. ಕಿಡ್ನಿ ಸ್ಟೋನ್ 

ಪುರುಷರಲ್ಲಿ ದೊಡ್ಡದಾದ ಪ್ರೊಸ್ಟೆಟ್ ಗ್ರಂಥಿಯ ಸಮಸ್ಯೆಯಿಂದಾಗಿ ಉರಿಮೂತ್ರ ಉಂಟಾಗುತ್ತದೆ.

ಲಕ್ಷಣಗಳು ಏನು?

*ಸೊಂಟನೋವು

*ಮೇಲಿಂದ ಮೇಲೆ ಮೂತ್ರ ವಿಸರ್ಜನೆ

*ಮೂತ್ರ ವಿಸರ್ಜನೆ ಸಮಯದಲ್ಲಿ ನೋವು *ಉರಿಮೂತ್ರ

*ಮೂತ್ರದ ಬಣ್ಣ ಹಾಗೂ ವಾಸನೆಯಲ್ಲಿ ವ್ಯತ್ಯಾಸ *ಕಿಬ್ಬೊಟ್ಟೆ ನೋವು

*ಚಳಿ, ಜ್ವರ, ವಾಂತಿ

ಪತ್ತೆ ಹಚ್ಚುವ ವಿಧಾನಗಳು ಏನು?

ಯೂರಿನ್ ಅನಾಲಿಸಿಸ್ : ಇದರ ಮೂಲಕ ಸೊಂಕಿನ ತೀವ್ರತೆಯನ್ನು ಪತ್ತೆಹಚ್ಚಬಹುದು.

ಯೂರಿನ್ ಕಲ್ಚರ್ : ಇದರಿಂದ ಯಾವ ಸೂಕ್ಷ್ಮಣು ಜೀವಿಯಿಂದ ತೊಂದರೆ ಉಂಟಾಗಿದೆ ಎಂದು ತಿಳಿದುಕೊಳ್ಳಬಹುದು.

ಅಲ್ಟ್ರಾಸೌಂಡ್ : ಒಂದುವೇಳೆ  ಚಿಕಿತ್ಸೆ ನಂತರವೂ ಗುಣಮುಖವಾಗದೆ ಇದ್ದಲ್ಲಿ, ಇದರ ಮೂಲಕ ಮೂತ್ರ ನಾಳ ಅಥವಾ ಕೋಶದಲ್ಲಿಇರುವ ತೊಂದರೆಯನ್ನು ಪತ್ತೆ ಹಚ್ಚಬಹುದು.

ಸಿಸ್ಟೋಸ್ಕೋಪಿ: ಇದರ ಮೂಲಕ ಮೂತ್ರಕೋಶದ ಒಳಭಾಗವನ್ನು ವೀಕ್ಷಿಸಿ ಸೂಕ್ತ ಕಾರಣವನ್ನು ತಿಳಿದುಕೊಳ್ಳಬಹುದು.


ತಡೆಗಟ್ಟುವ ಕ್ರಮ ಹೇಗೆ?

*ಹೆಚ್ಚಿನ ಪ್ರಮಾಣದಲ್ಲಿ  ನೀರನ್ನು ಕುಡಿಯುವುದರಿಂದ ಬ್ಯಾಕ್ಟರಿಯ ಬೆಳೆಯದಂತೆ ತಡೆಯಬಹುದು.

*ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು.

*ಮೂತ್ರವನ್ನು ತಡೆಹಿಡಿಯದೇ ಇರುವುದು

*ಮಧುಮೇಹ ನಿಯಂತ್ರಣ

* ಮಲಬದ್ಧತೆ ಆಗದಂತೆ ಎಚ್ಚರವಹಿಸುವುದು

*ವಿಟಮಿನ್ C ಜಾಸ್ತಿ ಹೊಂದಿರುವ ಆಹಾರ ಸೇವನೆ ಮಾಡುವುದರಿಂದ ಮೂತ್ರದ ಸೋಂಕು ಬಾರದಂತೆ ತಡೆಗಟ್ಟಬಹುದು.

*ಮೂತ್ರಜನಕಾಂಗದ ಸೋಂಕು ಉಂಟಾದ ತಕ್ಷಣ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಸೋಂಕು ತೀವ್ರತೆಯನ್ನು ನಿಯಂತ್ರಿಸಬಹುದು.

ಡಾ. ಭವ್ಯ ಶೆಟ್ಟಿ
ಹೋಮಿಯೋಪತಿ ವೈದ್ಯರು
ಶ್ರೀ ಗುರು ಹೋಮಿಯೋಪತಿ

ಇತ್ತೀಚಿನ ಸುದ್ದಿ

ಜಾಹೀರಾತು