1:17 AM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್ ಕೂಡ ಶಾಮೀಲು

22/02/2025, 09:58

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯಲ್ಲಿನ ಕೋಟ್ಯಾಂತರ ರೂಪಾಯಿ ಲೂಟಿ ನಡೆದಿರುವುದು ಬೆಳಕಿಗೆ ಬಂದಿದೆ.
ಮುಜರಾಯಿ ದೇವಸ್ಥಾನಗಳ ಅರ್ಚಕರಿಗೆ ಸೇರಬೇಕಾದ 1,87,86,561 ರೂ. ಹಣ ಲೂಟಿಯಾಗಿದೆ. ಲಿಂಗಸುಗೂರು ಕೆನರಾ ಬ್ಯಾಂಕ್ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಸರ್ಕಾರದ ಹಣವನ್ನು ಅಧಿಕಾರಿಗಳು ಕುಟುಂಬಸ್ಥರು ಹಾಗೂ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮುಜರಾಯಿ ಖಾತೆಯ ಹಣ ಲಪಟಾಯಿಸಿದ್ದು, ಕಚೇರಿಯ ಐವರು ಅಧಿಕಾರಿಗಳಿಂದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ದ್ವಿತೀಯ ದರ್ಜೆ ಸಹಾಯಕನ ಮೇಲೆ ಆರೋಪ ಹೊರಿಸಿ ಕೈ ತೊಳೆದುಕೊಳ್ಳಲು ಸಂಚು ನಡೆದಿಸಿದ್ದರು ಎನ್ನಲಾಗಿದೆ. ಎಸ್‌ಡಿಎ ಯಲ್ಲಪ್ಪನಿಂದ ತನ್ನ ಪತ್ನಿ, ಮಗ, ಮಗಳು, ಟೆಕ್ಸಟೈಲ್ ಹಾಗೂ ಕಿರಾಣಿ ಅಂಗಡಿಗಳಿಗೆ ಹಣ ವರ್ಗಾವಣೆಯಾಗಿದೆ.
ಸದ್ಯ ಹಗರಣ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಲಿಂಗಸುಗೂರು ತಹಶೀಲ್ದಾರ್ ಶಂಶಾಲಂ ಅವರು ಎಸ್‌ಡಿಎ ಯಲ್ಲಪ್ಪ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು