7:05 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:…

ಇತ್ತೀಚಿನ ಸುದ್ದಿ

Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು ಗುಂಡು

28/07/2026, 18:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಅಕ್ರಮವಾಗಿ ಕಾಡುಹಂದಿಗಳನ್ನು ಬೇಟೆಯಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ತಂಡದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಅನ್ವಿತ್ ಬಂಧಿತ ಆರೋಪಿ. ಈತನ ಕಾಲಿಗೆ ಗುಂಡು ಬಿದ್ದಿದೆ. ಜೊತೆಗೆ ಬಂದಿದ್ದ ಮೂವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರ್ಶನ್, ಮಂಜು ಮತ್ತು ಕಿರಣ್ ಪರಾರಿಯಾದ ಆರೋಪಿಗಳು.
ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಆಲ್ಟೋ ಕಾರನ್ನು ಸಿಬ್ಬಂದಿ ತಡೆದು ತಪಾಸಣೆ ನಡೆಸಲು ಯತ್ನಿಸಿದಾಗ, ಕಾರಿನಲ್ಲಿದ್ದ ನಾಲ್ವರು ಆರೋಪಿಗಳು ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಜಾಗರೂಕರಾಗಿ ಗುಂಡು ಹಾರಿಸಿ ಅನ್ವಿತ್‌ನನ್ನು ಸೆರೆಹಿಡಿದಿದ್ದಾರೆ. ಪರಾರಿಯಾದವರಿಗಾಗಿ ಶೋಧ ನಡೆಯುತ್ತಿದೆ. ಕಾರ್ಯಾಚರಣೆ ವೇಳೆ ಬೇಟೆಗಾರರಿಂದ ಎರಡು ಕಾಡುಹಂದಿಗಳ ಮೃತದೇಹ, ಒಂದು ಮಚ್ಚು, ಎರಡು ಟಾರ್ಚ್‌ಗಳು, ಒಂದು ಟಾರ್ಪಲ್, ಒಂದು ಮೊಬೈಲ್ ಫೋನ್ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಆಲ್ಟೋ ಕಾರನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು