2:08 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

Mysore | ಎಚ್. ಡಿ. ಕೋಟೆ: ತಾಯಿಯಿಂದ ಬೇರ್ಪಟ್ಟ ಮರಿಯಾನೆ ಬಳ್ಳೆ ಕ್ಯಾಂಪ್ ನಲ್ಲಿ ಸಾವು

16/09/2025, 19:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದ ಅರಣ್ಯದಂಚಿನ ಗ್ರಾಮ ಪುಲ್ಲಪಳ್ಳಿಯ ಚೇಕಾಡಿ ಶಾಲೆಯಲ್ಲಿ ಕಾಣಿಸಿಕೊಂಡು ಬಳಿಕ ಕರ್ನಾಟಕದ ಹೆಚ್. ಡಿ ಕೋಟೆಯ ಓಡಕಮಾಳದ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ 3 ತಿಂಗಳ ಹೆಣ್ಣು ಮರಿಯಾನೆ ಸಾವನಪ್ಪಿದೆ.

ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಮರಿಯ ತಾಯಿಯ ಹಿಂಡನ್ನು ಗುರುತಿಸಿ ಅರಣ್ಯಕ್ಕೆ ಸೇರಿಸಿದ್ದರು, ಆದರೆ ತಾಯಿ ಬಳಿ ತೆರಳದೆ ಮತ್ತೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಹೆಚ್. ಡಿ. ಕೋಟೆ ಬಳ್ಳೆ ಆನೆ ಶಿಬಿರದಲ್ಲಿ ಆರೈಕೆ ಪಡೆಯುತ್ತಿತ್ತು, ಆದರೆ ಮರಿ ಆನೆಗಳಿಗೆ ತಾಯಿಯ ಆರೈಕೆ ಇಲ್ಲದೆ ಬದುಕುವುದು ಕಷ್ಟ ಹಾಗೆಯೇ ಈ ಮರಿಯಾನೆಗೆ ಹಸುವಿನ ಹಾಲನ್ನು ನೀಡಿ ಆರೈಕೆ ಮಾಡಲಾಗಿತ್ತಾದರೂ ಬದುಕುಳಿಯಲಿಲ್ಲ, ಬಳ್ಳೆ ಕ್ಯಾಂಪ್ ನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು