10:42 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ದೋಸೆ ಹೊಯ್ದ ಪ್ರಿಯಾಂಕಾ ವಾದ್ರ!: ಜನರಿಗೆ ಖುಷಿಯೇ ಖುಷಿ

26/04/2023, 23:46

ಮೈಸೂರು(reporterkarnataka.com); ಜನ ಸಾಮಾನ್ಯರ ಜತೆ ಬೆರೆಯುವ ಮೂಲಕವೇ ಗಾಂಧಿ ಕುಟುಂಬ ಪ್ರಸಿದ್ಧಿಗೆ ಬಂದಿರುವುದು. ಇದೀಗ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ ಪ್ರಿಯಾಂಕಾ ವಾದ್ರ ಇಲ್ಲಿನ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ದೋಸೆ ಹೊಯ್ದು ಸುದ್ದಿ ಮಾಡಿದರು.


ಮೈಸೂರಿನ ಮೈಲಾರಿ ಹೋಟೆಲ್ ಅಂದ್ರೆ ಲಲಿತ ಮಹಲ್ ಪ್ಯಾಲೇಸ್, ಬಾಂಬೆಯ ಅಶೋಕ, ದಿಲ್ಲಿಯ ಮೌರ್ಯ ಹೋಟೆಲ್ ತರಹ ಸ್ಟಾರ್ ಹೋಟೆಲ್ ಅಲ್ಲ. ಬದಲಿಗೆ ಅದೊಂದು ಸಣ್ಣ ಗೂಡಿನ ಮಾದರಿಯ ಹೋಟೆಲ್ ಆಗಿದೆ. ಕಾಂಗ್ರೆಸ್ ನ ಯುವ ರಾಣಿ ಪ್ರಿಯಾಂಕಾ ಅವರು ಹೋಟೆಲಿಗೆ ಭೇಟಿ ಕೊಟ್ಟವರು ನೇರವಾಗಿ ನುಗ್ಗಿದ್ದು ಅಡುಗೆ ಮನೆಗೆ. ಪ್ರಿಯಾಂಕಾ ಅವರಿಗೆ ದಕ್ಷಿಣ ಭಾರತದ ದೋಸೆ ಕುರಿತು ಕುತೂಹಲ. ಹೋಟೆಲಿನ ಮಾಲೀಕ ಕಮ್ ಅಡುಗೆ ಭಟ್ಟರಲ್ಲಿ ಮಾಹಿತಿ ಪಡೆದ ಪ್ರಿಯಾಂಕಾ ವಾದ್ರ ಅವರು ಕಾದ ಕಾವಲಿಯ ಮೇಲೆ ದೋಸೆ ಹೊಯ್ದೇ ಬಿಟ್ಟರು. ಉದ್ದಿನ ದಪ್ಪ ದೋಸೆಯನ್ನು ಮಗುಚಿ ಹಾಕಬೇಕೆನ್ನುವ ಮಾಹಿತಿ ಇಲ್ಲದ ಪ್ರಿಯಾಂಕಾ ಅವರು ಅದನ್ನು ಸಿಂಗ್ ಫೋಲ್ಡ್ ಮಾಡಿ ಕಾವಲಿಯಿಂದ ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಹೋಟೆಲ್ ನ ಅಡುಗೆ ಭಟ್ಟರು ಅದನ್ನು ತಿರುಗಿಸಿ ಹಾಕುವ ಬಗ್ಗೆ ಮಾಹಿತಿ ನೀಡಿದರು. ಒಟ್ಟಿನಲ್ಲಿ ಪ್ರಿಯಾಂಕಾ ಅವರು ದೋಸೆ ಹಾಕುವ ಕುರಿತು ಮಾಹಿತಿ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು