8:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ದೋಸೆ ಹೊಯ್ದ ಪ್ರಿಯಾಂಕಾ ವಾದ್ರ!: ಜನರಿಗೆ ಖುಷಿಯೇ ಖುಷಿ

26/04/2023, 23:46

ಮೈಸೂರು(reporterkarnataka.com); ಜನ ಸಾಮಾನ್ಯರ ಜತೆ ಬೆರೆಯುವ ಮೂಲಕವೇ ಗಾಂಧಿ ಕುಟುಂಬ ಪ್ರಸಿದ್ಧಿಗೆ ಬಂದಿರುವುದು. ಇದೀಗ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ ಪ್ರಿಯಾಂಕಾ ವಾದ್ರ ಇಲ್ಲಿನ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ದೋಸೆ ಹೊಯ್ದು ಸುದ್ದಿ ಮಾಡಿದರು.


ಮೈಸೂರಿನ ಮೈಲಾರಿ ಹೋಟೆಲ್ ಅಂದ್ರೆ ಲಲಿತ ಮಹಲ್ ಪ್ಯಾಲೇಸ್, ಬಾಂಬೆಯ ಅಶೋಕ, ದಿಲ್ಲಿಯ ಮೌರ್ಯ ಹೋಟೆಲ್ ತರಹ ಸ್ಟಾರ್ ಹೋಟೆಲ್ ಅಲ್ಲ. ಬದಲಿಗೆ ಅದೊಂದು ಸಣ್ಣ ಗೂಡಿನ ಮಾದರಿಯ ಹೋಟೆಲ್ ಆಗಿದೆ. ಕಾಂಗ್ರೆಸ್ ನ ಯುವ ರಾಣಿ ಪ್ರಿಯಾಂಕಾ ಅವರು ಹೋಟೆಲಿಗೆ ಭೇಟಿ ಕೊಟ್ಟವರು ನೇರವಾಗಿ ನುಗ್ಗಿದ್ದು ಅಡುಗೆ ಮನೆಗೆ. ಪ್ರಿಯಾಂಕಾ ಅವರಿಗೆ ದಕ್ಷಿಣ ಭಾರತದ ದೋಸೆ ಕುರಿತು ಕುತೂಹಲ. ಹೋಟೆಲಿನ ಮಾಲೀಕ ಕಮ್ ಅಡುಗೆ ಭಟ್ಟರಲ್ಲಿ ಮಾಹಿತಿ ಪಡೆದ ಪ್ರಿಯಾಂಕಾ ವಾದ್ರ ಅವರು ಕಾದ ಕಾವಲಿಯ ಮೇಲೆ ದೋಸೆ ಹೊಯ್ದೇ ಬಿಟ್ಟರು. ಉದ್ದಿನ ದಪ್ಪ ದೋಸೆಯನ್ನು ಮಗುಚಿ ಹಾಕಬೇಕೆನ್ನುವ ಮಾಹಿತಿ ಇಲ್ಲದ ಪ್ರಿಯಾಂಕಾ ಅವರು ಅದನ್ನು ಸಿಂಗ್ ಫೋಲ್ಡ್ ಮಾಡಿ ಕಾವಲಿಯಿಂದ ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಹೋಟೆಲ್ ನ ಅಡುಗೆ ಭಟ್ಟರು ಅದನ್ನು ತಿರುಗಿಸಿ ಹಾಕುವ ಬಗ್ಗೆ ಮಾಹಿತಿ ನೀಡಿದರು. ಒಟ್ಟಿನಲ್ಲಿ ಪ್ರಿಯಾಂಕಾ ಅವರು ದೋಸೆ ಹಾಕುವ ಕುರಿತು ಮಾಹಿತಿ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು