7:49 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ ಬಂಧನ

11/11/2025, 12:03

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ಆನೆ ಚೌಕೂರು ಅರಣ್ಯ ಪ್ರದೇಶದಲ್ಲಿ ಜಿಂಕೆ ಮತ್ತು ಮೌಸ್ ಡೀರ್(ಕೂರ) ಬೇಟೆಯಾಡಿದ ಕೊಡಗು ಜಿಲ್ಲೆಯ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಗ್ರಾಮದ ರೂಪೇಶ್ ಚಿಕ್ಕತೊಳೂರು ಗ್ರಾಮದ ಜೀವಿತ್ ಹಾಗೂ ಕುಶಾಲನಗರದ ಗಂಧದ ಕೋಟೆಯ ಅರುಣ್ ಅವರುಗಳು ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿ ಜಿಂಕೆ ಮತ್ತು ಕೂರ ವನ್ನು ಬೇಟೆ ಮಾಡಿದ್ದು ವಾಹನ ಸಾಗಿಸುವ ಸಂದರ್ಭ ಕಾರ್ಯಾಚರಣೆ ನಡೆಸಿದ್ದು ಹುಣಸೂರು ಆನೆ ಚೌಕೂರು ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಪರಿಶೀಲನೆ ನಡೆಸಿದ ವೇಳೆ ರೂಪೇಶ್ ಮತ್ತು ಅರುಣ್ ನನ್ನು ವಶಕ್ಕೆ ಪಡೆದಿದ್ದು ಜೀವಿತ್ ಪರಾರಿಯಾಗಿದ್ದಾನೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಕಾರ್, ಒಂಟಿ ನಳಿಕೆ ಕೋವಿ, ಎರಡು ಕಾಡು ತೋಸು, ಹೆಡ್ ಟಾರ್ಚ್, ಮೂರು ಮೊಬೈಲ್ ಮತ್ತು ಮೃತ ಜಿಂಕೆ ಹಾಗೂ ಮೌಸ್ ಡೀರ್ ನನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು