1:33 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

16/06/2026, 20:48

ಬೆಂಗಳೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಬ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿದ್ದು, ಏಳು ಮಂದಿಗೆ ಗಾಯಗಳಾಗಿವೆ. ಇದರ ಬೆನ್ನಲ್ಲೆ ನಗರಾದ್ಯಂತ ಅನೇಕ ಪಬ್, ಬಾರ್, ರೆಸ್ಟೋರೆಂಟ್‌ಗಳು ಪರವಾನಿಗೆ ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಬ್ ನಲ್ಲಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ. ಪಬ್ ಮಾಲೀಕನ ವಿರುದ್ಧ ದೂರು ದಾಖಲಿಸಲಾಗಿದೆ. ಪರಾವನಿಗೆ ಪಡೆಯದೇ ಈ ರೀತಿಯ ಅವಘಡಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.
ಪೊಲೀಸರ ತನಿಖೆಗೆ ವೇಳೆ ಯಾವುದೇ ಲೈಸನ್ಸ್ ಇಲ್ಲದೆ ಪಬ್ ನಡೆಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಅನೇಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಗಳು ಲೈಸನ್ಸ್ ಪಡೆಯದೇ ನಡೆಸುತ್ತಿರುವ ವಿಚಾರ ಗೊತ್ತಾಗಿದೆ. ಇದೇ ವಿಚಾರವಾಗಿ ನಾನು ಅಬಕಾರಿ ಡಿಸಿಗೆ ಸೂಕ್ತ ಕ್ರಮ ಜರುಗಿಸುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಅವರು ತಿಳಿಸಿದರು.

*ಮೈಸೂರು ಅಕ್ರಮ, ಬಾರ್ ರೆಸ್ಟೋರೆಂಟ್‌ ಮಾಲೀಕರಿಗೆ ನಡುಕ:*
ಮೈಸೂರಿನಲ್ಲಿ ಎಲ್ಲೆಲ್ಲಿ ಅಕ್ರಮವಾಗಿ ಹಾಗೂ ಲೈಸನ್ಸ್ ಇಲ್ಲದೆ ಬಾರ್ ಆಂಡ್ ರೆಸ್ಟೋರೆಂಟ್ ನಡೆಯುತ್ತಿದೆ ಅಂತವುಗಳನ್ನು ಗುರುತಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಿರ್ದೇಶಿಸಲಾಗಿದೆ. ಈ ಮೂಲಕ ಅಕ್ರಮ, ನಿಯಮ ಮೀರಿ ಪಬ್, ಬಾರ್ ನಡೆಸುವ ಮಾಲೀಕರಿಗೆ ನಡುಕ ಶುರುವಾಗಿದೆ. ಇನ್ನೂ ಲೈಸನ್ಸ್ ಇಲ್ಲದೆ ಬಾರ್ ನಡೆಸುತ್ತಿದ್ದರೂ ಸಹಿತ ಅಬಕಾರಿ ಡಿಸಿ ಕಣ್ಮುಚ್ಚಿ ಕುಳಿತಿದ್ದರಾ? ಎಂಬ ಪ್ರಶ್ನೆಗೆ ಅವರು, ಅಧಿಕಾರಿಗಳ ಮೇಲೂ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ, ಅದು ನನ್ನ ಗಮನದಲ್ಲಿದೆ. ಅಮಾನತು ಮಾಡುವಂತೆ ಶಿಫಾರಸು ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು