6:39 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೈಸೂರು ವಿವಿ: ಕಚ್ಚೆ ಹರುಕ ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು

06/08/2021, 09:42

ಮೈಸೂರು(reporterkarnataka.com): ಮನೆಯಲ್ಲಿ ಪತ್ನಿ ಇಲ್ಲದ ವೇಳೆ ಸಂಶೋಧನ ವಿದ್ಯಾರ್ಥಿನಿಯೊಬ್ಬಳನ್ನು ಮನೆಗೆ ಕರೆಸಿ ಪ್ರಾಧ್ಯಾಪಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸಂತ್ರಸ್ತೆ ಹಾಗೂ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಮಚಂದ್ರಪ್ಪ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ರಾಮಚಂದ್ರಪ್ಪ ಅವರ ಪತ್ನಿ ಇದೇ ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕಿ.

ವಿದ್ಯಾರ್ಥಿನಿಯು ರಾಮಚಂದ್ರಪ್ಪರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಮಾಡುತ್ತಿದ್ದು, ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ.ಯುವತಿ ಸಹಾಯಕ್ಕಾಗಿ ಕೂಗಿದ್ದಾಳೆ ಎನ್ನಲಾಗಿದೆ. ಆಗ ಕಾಲೇಜಿನಿಂದ ಮನೆಗೆ ಮರಳಿದ ಪತ್ನಿಗೆ ವಿಷಯ ತಿಳಿದು ಸಂತ್ರಸ್ತೆ ಯೊಂದಿಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ತನ್ನ ಪತಿಯ ವಿರುದ್ಧವೇ ಆಕ್ರೋಶ ಹೊರಹಾಕಿರುವ ಪ್ರಾಧ್ಯಾಪಕಿ, ರಾಮಚಂದ್ರಪ್ಪ ಮಾನಸಗಂಗೋತ್ರಿಯಲ್ಲಿ ಹಲವು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆದರೆ ಈ ಬಗ್ಗೆ ಯಾವುದೇ ಆಧಾರ ಸಿಕ್ಕಿರಲಿಲ್ಲ. ಆದ್ದರಿಂದ ಹಿಂದೆ ಈತನ ವಿರುದ್ಧ ದೂರು ನೀಡಲಾಗಲಿಲ್ಲ. ಗುರುವಾರ ಸ್ಪಷ್ಟ ಸಾಕ್ಷ್ಯ ಸಿಕ್ಕಿದ್ದು, ಸಂತ್ರಸ್ತೆಯೊಂದಿಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಸಂತ್ರಸ್ತೆ ಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು