5:34 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Mysore | ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

09/06/2025, 13:36

ಮೈಸೂರು(reporterkarnataka.com): ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಮೋದಿ ಪ್ರಚಾರದಿಂದ ಬದುಕಿರುವುದು.
ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.

*ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ:
ಪ್ರಧಾನಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು.

*ಸುಳ್ಳು ವಿಚಾರಗಳಿಗೆ ಪ್ರಚಾರ:
ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ,ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು. ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು