6:49 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ದೇವಾಲಯಗಳ ತೆರವು ಕುರಿತು ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ ; ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು ಗೊತ್ತಾ.?

12/09/2021, 22:23

ಮೈಸೂರು(Reporterkarnataka.com)

ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯವನ್ನು ವಿರೋಧಿಸಿದರೆ ಶಾಸಕ ಎ.ರಾಮ್‌ದಾಸ್ ಜಿಲ್ಲಾಡಳಿತವನ್ನು ಡಿಫೆಂಡ್ ಮಾಡುತ್ತಿದ್ದಾರೆ.

ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ಕರೆಸಿ ಮಾತಾನಾಡಿದ ಸಂಸದ ಪ್ರತಾಪ್ ಸಿಂಹ, ಮೈಸೂರಿನಲ್ಲಿ 90ಕ್ಕಿಂತ ಅಧಿಕ ದೇವಾಲಯಗಳಿವೆ. ಅವುಗಳನ್ನು ಕೆಡವುದರಿಂದ ಜನರ ಭಾವನೆಗೆ ಧಕ್ಕೆಯಾಗುತ್ತದೆ. ಕೆಡಿಪಿ ಸಭೆಯಲ್ಲಿ ನಾನು ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. ನಮ್ಮ ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡ್ತಿರಾ?, ದರ್ಗಾ, ಚರ್ಚ್‌ಗಳು ಯಾಕೆ ತೆರವು ಮಾಡಿಲ್ಲ” ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ದೇವಾಲಯಗಳ ಪಟ್ಟಿ ಪರೀಲನೆ ಮಾಡಬೇಕು. 2010ರ ರಾಜ್ಯ ಸರ್ಕಾರದ ಆದೇಶವನ್ನು ತಕ್ಷಣ ವಾಪಸ್ ಪಡೆದು ಮತ್ತೊಮ್ಮೆ ಸುಪ್ರೀಂಕೋರ್ಟ್ ಮುಂದೆ ಪರಿಷ್ಕೃತ ಪಟ್ಟಿ ಸಲ್ಲಿಸಬೇಕು. ಸಾರ್ವಜನಿಕವಾಗಿ ತೊಂದರೆಯಾಗುವ ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳನ್ನು ಪ್ರತ್ಯೇಕ ಪ್ರಕರಣವಾಗಿ ಪರಿಗಣಿಸಿ. ಸ್ಥಳೀಯರೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಿ. ಇಲ್ಲವಾದರೆ ರಾಜ್ಯಾದ್ಯಂತ ದೇವಾಲಯಗಳನ್ನು ಉಳಿಸಿ ಎಂಬ ಅಭಿಯಾನ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಆದರೆ ಬಿಜೆಪಿಯಲ್ಲೇ ಈ ಕುರಿತು ಭಿನ್ನಾಭಿಪ್ರಾಯ ಹುಟ್ಟಿಕೊಂಡಿದ್ದು, ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಎಸ್.ಎ.ರಾಮದಾಸ್, ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ. ಸುಪ್ರೀಂಕೋರ್ಟ್‌ ಸೂಚನೆಯಂತೆ ಕ್ರಮ ಜರುಗುತ್ತಿದೆ” ಎಂದು ಹೇಳಿದ್ದಾರೆ.

“ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವು ಮಾಡಲಾಗುತ್ತಿಲ್ಲ, ಮೊದಲು ಉಳಿಸಿಕೊಳ್ಳುವ ಯೋಚನೆ‌ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಸ್ಥಳಾಂತರಕ್ಕೆ ಚಿಂತನೆ ಇದೆ. ಇದೆರಡೂ ಸಾಧ್ಯವಾಗದೆ ಇದ್ದಾಗ ತೆರವು ಮಾಡಲಾಗುತ್ತಿದೆ. ಇದರಲ್ಲಿ ಆ ಧರ್ಮದ್ದು ಈ ಧರ್ಮದ್ದು ಎಂಬುದು ಏನು ಇಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು