2:18 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಸುರಕ್ಷಿತವಾಗಿ ಪತ್ತೆ: ಉಡುಪಿಯಲ್ಲಿ ಪ್ರತ್ಯಕ್ಷ

08/03/2025, 17:18

ಬಂಟ್ವಾಳ(reporterkarnataka.com):ಫೆ.25 ರಂದು ಮನೆಯ ಹತ್ತಿರದ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿಬರುತ್ತೇನೆಂದು ಹೇಳಿ ಹೋಗಿದ್ದ ಪಿಯು ವಿದ್ಯಾರ್ಥಿ ದಿಗಂತ್ ಕ್ಷೇಮವಾಗಿ ಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ.
ಆತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಾಣೆಯಾದ ದಿನದಂದು ಆತನ ಚಪ್ಪಲಿ, ಮೊಬೈಲ್ ಪತ್ತೆಯಾದ ಬಳಿಕ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ಫರಂಗಿಪೇಟೆಯಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದು ಶೀಘ್ರವಾಗಿ ಪತ್ತೆ ಹಚ್ಚುವಂತೆ ಒತ್ತಾಯಿಸಲಾಗಿತ್ತು. ವಿಶ್ವ ಹಿಂದು ಪರಿಷತ್, ವಿದ್ಯಾರ್ಥಿ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಕಳೆದ ಹನ್ನೆರಡು ದಿನಗಳಿಂದ ವಿದ್ಯಾರ್ಥಿ ಕಾಣೆಯಾಗಿರುವುದನ್ನು ಪತ್ತೆ ಮಾಡದಿರುವ ಪೊಲೀಸ್ ಇಲಾಖೆಯ ಬಗ್ಗೆ ಆರೋಪ ಮಾಡಿದ್ದು ಮಾ.10 ರ ಒಳಗೆ ಪತ್ತೆಯಾಗದಿದ್ದಲ್ಲಿ ರಾಜ್ಯ ವ್ಯಾಪಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದವು.
ಪಕ್ಕದ ಉಡುಪಿಯಲ್ಲಿ ಬಾಲಕ ಪತ್ತೆಯಾಗಿದ್ದು , ಪೊಲೀಸರು ಕರೆತರುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು