5:14 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಸುರಕ್ಷಿತವಾಗಿ ಪತ್ತೆ: ಉಡುಪಿಯಲ್ಲಿ ಪ್ರತ್ಯಕ್ಷ

08/03/2025, 17:18

ಬಂಟ್ವಾಳ(reporterkarnataka.com):ಫೆ.25 ರಂದು ಮನೆಯ ಹತ್ತಿರದ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿಬರುತ್ತೇನೆಂದು ಹೇಳಿ ಹೋಗಿದ್ದ ಪಿಯು ವಿದ್ಯಾರ್ಥಿ ದಿಗಂತ್ ಕ್ಷೇಮವಾಗಿ ಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ.
ಆತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಾಣೆಯಾದ ದಿನದಂದು ಆತನ ಚಪ್ಪಲಿ, ಮೊಬೈಲ್ ಪತ್ತೆಯಾದ ಬಳಿಕ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ಫರಂಗಿಪೇಟೆಯಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದು ಶೀಘ್ರವಾಗಿ ಪತ್ತೆ ಹಚ್ಚುವಂತೆ ಒತ್ತಾಯಿಸಲಾಗಿತ್ತು. ವಿಶ್ವ ಹಿಂದು ಪರಿಷತ್, ವಿದ್ಯಾರ್ಥಿ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಕಳೆದ ಹನ್ನೆರಡು ದಿನಗಳಿಂದ ವಿದ್ಯಾರ್ಥಿ ಕಾಣೆಯಾಗಿರುವುದನ್ನು ಪತ್ತೆ ಮಾಡದಿರುವ ಪೊಲೀಸ್ ಇಲಾಖೆಯ ಬಗ್ಗೆ ಆರೋಪ ಮಾಡಿದ್ದು ಮಾ.10 ರ ಒಳಗೆ ಪತ್ತೆಯಾಗದಿದ್ದಲ್ಲಿ ರಾಜ್ಯ ವ್ಯಾಪಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದವು.
ಪಕ್ಕದ ಉಡುಪಿಯಲ್ಲಿ ಬಾಲಕ ಪತ್ತೆಯಾಗಿದ್ದು , ಪೊಲೀಸರು ಕರೆತರುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು