1:09 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೈಸೂರು ದಸರಾ: ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್‌ ಟೂರ್

26/09/2022, 19:23

ಮೈಸೂರು(reporterkarnataka.com): ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒಂದು ದಿನದ ವಿಶೇಷ ಪ್ಯಾಕೇಜ್ ವ್ಯವಸ್ಥೆ ಕಲ್ಪಿಸಿದೆ.

*ಗಿರಿದರ್ಶಿನಿ:ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ ಸುತ್ತಾಡಲು ಅವಕಾಶವಿದ್ದು, ವಯಸ್ಕರಿಗೆ ₹ 400, ಮಕ್ಕಳಿಗೆ 250 ರೂ ದರ ನಿಗದಿಪಡಿಸಿದೆ.

*ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. ( ವಯಸ್ಕರಿಗೆ 450ರೂ , ಮಕ್ಕಳಿಗೆ 250ರೂ)

*ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ವಯಸ್ಕರಿಗೆ ರೂ300 ಮಕ್ಕಳಿಗೆ 175ರೂ)

*ಮೈಸೂರು ನಗರ: ನಗರ ಬಸ್ ನಿಲ್ದಾಣದಿಂದ ಅರಮನೆ ರಸ್ತೆ, ಮೈಸೂರು ಕೇಂದ್ರೀಯ ಬಸ್ ನಿಲ್ದಾಣ ರಸ್ತೆ, ಎಲ್.ಐ.ಸಿ ವೃತ್ತ, ಬಂಬೂ ಬಜಾರ್ ರಸ್ತೆ, ರೈಲ್ವೆ ನಿಲ್ದಾಣ ವೃತ್ತ, ಜೆ.ಎಲ್.ಬಿ ರಸ್ತೆ ಮತ್ತು ನಗರ ಬಸ್ ನಿಲ್ದಾಣ (ವಯಸ್ಕರಿಗೆ 200ರೂ , ಮಕ್ಕಳಿಗೆ 150ರೂ).

*ಮೈಸೂರು ದರ್ಶಿನಿ: ನಗರ ವೋಲ್ವೋ ವಾಹನದಲ್ಲಿ ಪ್ರಯಾಣಿಸಲು ಅವಕಾಶವಿದ್ದು, ನಂಜನಗೂಡು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ, ಶ್ರೀರಂಗಪಟ್ಟಣ, ಕೆ.ಆರ್.ಎಸ್‌. (ವಯಸ್ಕರಿಗೆ 400, ಮಕ್ಕಳಿಗೆ 200).

*ಮಡಿಕೇರಿ ಪ್ಯಾಕೇಜ್ (ಐರಾವತ ಕ್ಲಬ್‌ ಕ್ಲಾಸ್‌): ನಿಸರ್ಗಧಾಮ-ಗೋಲ್ಡನ್ ಟೆಂಪಲ್-ಹಾರಂಗಿ ಜಲಾಶಯ-ರಾಜಾ ಸೀಟ್-ಅಬ್ಬೀಫಾಲ್ಸ್ (ವಯಸ್ಕರಿಗೆ: 1,200 ಮಕ್ಕಳಿಗೆ 1000)

*ಊಟಿ ಪ್ಯಾಕೇಜ್: ಊಟಿ-ಬಟಾನಿಕಲ್ ಗಾರ್ಡನ್-ಇಟಾಲಿಯನ್ ಮತ್ತು ರೋಸ್ ಗಾರ್ಡನ್- ಬೋಟ್ ಹೌಸ್ (ವಯಸ್ಕರಿಗೆ 1,600, ಮಕ್ಕಳಿಗೆ 1200).

ಅ.1ರಿಂದ ಅ.10ರವರೆಗೆ ಬಸ್‌ಗಳ ಕಾರ್ಯಾಚರಿಸಲಿದ್ದು, ಇ-ಟಿಕೇಟ್ ಬುಕಿಂಗ್‌ ಅನ್ನು ksrtc.karnataka.gov.in ವೆಬ್‌ಸೈಟ್‌ ಮುಖಾಂತರ, ಮೊಬೈಲ್ ಬುಕಿಂಗ್ ಹಾಗೂ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು