10:16 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು