9:45 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು