2:21 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು