9:04 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು