9:31 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು

04/12/2023, 20:26

ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ

info.reporterkarnataka@gmail.com

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ.
ಹಾಸನದ ಸಕಲೇಶಪುರ ಸಮೀಪದ ಯಸಳೂರು ಬಳಿ ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ರೇಡಿಯೋ ಕಾಲರ್ ಅಳವಡಿಸು ಪ್ರಕ್ರಿಯೆ ನಡೆಯ ಬೇಕಿತ್ತು. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ನಡೆಸಿತ್ತು. ಕಾಡಾನೆ ದಾಳಿಗೆ ಹೆದರಿ ಉಳಿದ ಎರಡು ಸಾಕಾನೆಗಳು ಪಲಾಯನ ಮಾಡಿತ್ತು. ಆದರೆ 65ರ ಹರೆಯದ ಅರ್ಜುನ ನೇರ ಕದನಕ್ಕೆ ಇಳಿದಿದ್ದ. ಮಾವುತನಿಗೂ ಅರ್ಜುನನ ನಿಯಂತ್ರಣ ಮಾಡಲು ಸಾಧ್ಯವಾಗದೆ ಆತ ಆನೆ ಮೇಲಿನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದ. ಭೀಕರ ಕಾಳಗದಲ್ಲಿ ಕಾಡಾನೆಯು ಅರ್ಜುನನ ಹೊಟ್ಟೆ ಪಕ್ಕೆಯ ಭಾಗಕ್ಕೆ ತಿವಿದಿತ್ತು. ಇದರಿಂದ ಗಂಭೀರ ಗಾಯಗೊಂಡ ಅರ್ಜುನ ನೆಲಕ್ಕೆ ಕುಸಿದು ಕೊನೆಯುಸಿರೆಳೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು