3:56 AM Wednesday15 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಮೈಸೂರು ‘ಮುಡಾ’ ಹಗರಣದ ಸಿಬಿಐ ತನಿಖೆಗೆ ಒಪ್ಪಿಸಿ: ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

06/11/2024, 18:23

ಬೆಂಗಳೂರು(reporterkarnataka.com): ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಹೊರಡುವ ಮುನ್ನ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.
ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ ಎಂದು ಒತ್ತಾಯಿಸಿದರು.
ಉಪ ಚುನಾವಣೆ ಸಂಬಂಧ ಪ್ರಶ್ನಿಸಿದಾಗ, 3ಕ್ಕೆ 3 ಕ್ಷೇತ್ರಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಉತ್ತರ ಕೊಟ್ಟರು.
ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರು ಒತ್ತಾಯಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ; ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.
ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೇ, ಸಂಬಂಧಿತ ಸಚಿವ ರಾಜೀನಾಮೆ ಕೊಡಬೇಕು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು