1:44 PM Thursday8 - May 2025
ಬ್ರೇಕಿಂಗ್ ನ್ಯೂಸ್
Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು