1:04 PM Monday5 - January 2026
ಬ್ರೇಕಿಂಗ್ ನ್ಯೂಸ್
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು