8:17 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು