4:15 AM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು