12:11 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು