8:21 PM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು