9:46 PM Friday26 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು