11:33 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು