9:52 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು