7:30 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು