7:32 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು